ನಿಂಬೆ ಹಣ್ಣಿನ ದೀಪ ಹಚ್ಚುವ ಕ್ರಮ ಹೀಗಿರಬೇಕು

ನಿಂಬೆಹಣ್ಣಿನ ದೀಪ ಯಾವ ಸಮಯದಲ್ಲಿ ಹಚ್ಚಬೇಕು ಮತ್ತು ಯಾರು ಹಚ್ಚಬಾರದು ಹಾಗು ಇದರ ಮಹತ್ವ ತಿಳಿದಿರಬೇಕು …? ನಿಂಬೆ ಹಣ್ಣು ದುರ್ಗಾದೇವಿಗೆ ಬಹಳ ಪ್ರಿಯವಾದುದ್ದರಿಂದ ದೇವಿಯ ಕೃಪೆ ಮತ್ತು ಆಶೀರ್ವಾದ ಸಿಗಲೆಂದು ಹಚ್ಚುತ್ತೇವೆ. ಸಂಸಾರದಲ್ಲಿ ಯಾವಾಗಲೂ ಜಗಳ, ಹಣಕಾಸಿನ ತೊಂದರೆಗಳು, ನಿರುತ್ಸಾಹ, ಆರೋಗ್ಯದ ಸಮಸ್ಯೆಗಳು, ಮನೆಯ ವಾಸ್ತುದೋಷಕ್ಕೆ, ಮುಖ್ಯವಾಗಿ ಕಾಳಸರ್ಪ ದೋಷಕ್ಕೆ, ವ್ಯವಹಾರದಲ್ಲಿ ತೊಂದರೆಯಾಗುತ್ತಿದ್ದರೆ, ಶತ್ರುಗಳ ಕಾಟ ಹೆಚ್ಚಿದ್ದರೆ, ಮದುವೆ ನಿಧಾನವಾಗುತ್ತಿದ್ದರೆ ಕೆಟ್ಟ ಕನಸುಗಳು ಅನುಭವಿಸುತಿದ್ದರೆ ದೇವಿಗೆ ನಿಂಬೆ ಹಣ್ಣಿನ ದೀಪವನ್ನು ಹಚ್ಚುವುದರಿಂದ ಮತ್ತು ದೇವಿಯನ್ನು ಆರಾಧನೆ ಮಾಡುವುದರಿಂದ ಈ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ. ನಿಂಬೆಹಣ್ಣಿನ ದೀಪವನ್ನು ಪಾರ್ವತಿ ಸ್ವರೂಪರಾದ ಅಂಬಾಭವಾನಿ, ಕಾಳಿಕದೇವಿ, ಚೌಡೇಶ್ವರಿ, ಮಾರಿಯಮ್ಮ, ದುರ್ಗಿದೇವಿ ಹಾಗೂ ಶಕ್ತಿ ದೇವಸ್ಥಾನಗಳಲ್ಲಿ ಹಚ್ಚುವುದು ಒಳ್ಳೆಯದು. ಮಂಗಳವಾರ ದಿನದಂದು ಮಧ್ಯಾಹ್ನ 3.30 ರಿಂದ 5.00 ಗಂಟೆಯವರೆಗೆ ಮತ್ತು ಶುಕ್ರವಾರ ಬೆಳಿಗ್ಗೆ 11.00ರಿಂದ 12.30 ವರೆಗೆ ಹಚ್ಚಬಹುದು. ನಿಂಬೆದೀಪವನ್ನು ಮಂಗಳವಾರ ಹಚ್ಚುವುದಕ್ಕಿಂತ ಶುಕ್ರವಾರ ಹಚ್ಚುವುದು ಬಹಳ ಶ್ರೇಷ್ಠ ಶುಕ್ರವಾರದ ದೀಪವು *ಸತ್ವಗುಣದಿಂದ* ಕೂಡಿರುತ್ತದೆ ಮತ್ತು ಶುಭಪ್ರದವಾಗಿರುತ್ತದೆ. ನಿಂಬೆಹಣ್ಣಿನ ದೀಪವನ್ನು ಹಚ್ಚಿಸಿ ನಂತರ ದೇವಿಗೆ ಅಷ್ಟೋತ್ತರ ಪೂಜೆಯನ್ನು ಮಾಡಿಸಬೇಕು. ಹೆಂಗಸರು ಪೂಜೆಯಾದ ನಂತರ ಅಲ್ಲಿಗೆ ಬಂದಿರುವ ಸುಮಂಗಲಿಯರಿಗೆ ಅರಿಶಿನ ಕುಂಕುಮಗಳನ್ನು ಕೊಟ್ಟು ನಮಸ್ಕಾರ ಮಾಡಿ ಅವರ ಆರ್ಶಿವಾದವನ್ನು ತೆಗೆದುಕೊಳ್ಳಬೇಕು. ಯಾರಿಗೆ ಸಮಸ್ಯೆ ಬಂದಿದೆ ಅವರಿಗೆ ಹಚ್ಚುವ ಸಮಯವಿಲ್ಲದಿದ್ದರೂ ಅವರ ಮನೆಯವರು ಯಾರು ಬೇಕಾದರು ದೀಪವನ್ನು ಹಚ್ಚಬಹುದು. (ಸಂಗ್ರಹ)

Related Articles

ಪ್ರತಿಕ್ರಿಯೆ ನೀಡಿ

Latest Articles