ಉಡುಪಿ ಶ್ರೀಕೃಷ್ಣಮಠಕ್ಕೆ ಭಕ್ತರಿಗೆ ಪ್ರವೇಶಕ್ಕೆ ಇಂದಿನಿಂದ ಅವಕಾಶ

ಉಡುಪಿ: ಕೊರೊನಾ ಸೋಂಕು ಆರಂಭವಾದ ಬಳಿಕ ಶ್ರೀಕೃಷ್ಣ ಮಠಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು.
ಸುಮಾರು ಆರು ತಿಂಗಳ ಬಳಿಕ ಸೆ.28ರಿಂದ ಭಕ್ತರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೊದಲ ಹಂತದಲ್ಲಿ ಅಪರಾಹ್ನ 2ರಿಂದ ಸಂಜೆ 5ರವರೆಗೆ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಯಾವುದೇ ಸೇವೆ ಮಾಡಿಸಲು ಅವಕಾಶವಿರುವುದಿಲ್ಲ. ರಾಜಾಂಗಣದ ಹಿಂಭಾಗದಿಂದ ಹೊಸ ಮಾರ್ಗದಲ್ಲಿ ಪ್ರವೇಶಿಸಿ ವಾಪಸ್ ಬರುವಂತೆ ವ್ಯವಸ್ಥೆ ಮಾಡಲಾಗಿದೆ.

ಸ್ಥಳಿಯ ಭಕ್ತರಿಗೆ ಪಾಸ್ ನೀಡುವ ವ್ಯವಸ್ಥೆ ಮಾಡಲಾಗಿದ್ದು, ಪಾಸ್ ಪಡೆದುಕೊಂಡು ರಥಬೀದಿ ಎದುರಿನ ಮಾರ್ಗದಿಂದ ಪ್ರವೇಶಿಸಿ ದೇವರ ದರ್ಶನ ಪಡೆಯಬಹುದು.

Related Articles

ಪ್ರತಿಕ್ರಿಯೆ ನೀಡಿ

Latest Articles