ಶ್ರೀರಾಘವೇಂದ್ರ ಸ್ವಾಮಿಗಳವರ ಬೃಂದಾವನಕ್ಕೆ ತೈಲಾಭ್ಯಂಜನ

ಬೆಂಗಳೂರು: ಬೆಂಗಳೂರಿನ ಜಯನಗರದ ೫ ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದೊಂದಿಗೆ “ನರಕ ಚತುರ್ದಶಿಯ ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀರಾಘವೇಂದ್ರ ಸ್ವಾಮಿಗಳವರ ಬೃಂದಾವನಕ್ಕೆ ಬೆಳಗಿನ ಜಾವ 6 ಗಂಟೆಗೆ ತೈಲಾಭ್ಯಂಜನ ನೆರವೇರಿಸಲಾಯಿತು.

ದೀಪಾರತಿಯೊಂದಿಗೆ ಪೂಜೆಯನ್ನು ನೆರವೇರಿಸಿ ತದನಂತರ ಪಂಚಾಮೃತ ಅಭಿಷೇಕ ಹಾಗೂ ಉತ್ಸವ ಪೂಜಾ ಕಾರ್ಯಕ್ರಮಗಳು ಆರ್ ಕೆ ವಾಧೀಂದ್ರ ಆಚಾರ್ಯರ ನೇತೃತ್ವದಲ್ಲಿ ನೇರವೇರಿತು.

ಈ ಸಂದರ್ಭದಲ್ಲಿ ಭಕ್ತಾದಿಗಳು ಭಾಗವಹಿಸಿ ಸಾಮಾಜಿಕ ಅಂತರ ಕಾಪಾಡಿಕೊಂಡು ಶ್ರೀಗುರುರಾಯರ ಅನುಗ್ರಹಕ್ಕೆ ಪಾತ್ರರಾದರು ಎಂದು ನಂದಕಿಶೋರ ಆಚಾರ್ಯರು ತಿಳಿಸಿದ್ದಾರೆ.

Related Articles

ಪ್ರತಿಕ್ರಿಯೆ ನೀಡಿ

Latest Articles