ವಿದ್ಯಾವಾಚಸ್ಪತಿ ಡಾ. ಶ್ರೀ ಬನ್ನಂಜೆ ಗೋವಿಂದಾಚಾರ್ಯ ಅವರಿಗೆ ಭಾವನಮನ

ಡಾ. ಬನ್ನಂಜೆ ಗೋವಿಂದಾಚಾರ್ಯ

ಶಿವಮೊಗ್ಗ: ಭಜನಾ ಪರಿಷತ್ ಶಿವಮೊಗ್ಗ (ನಗರದ ಭಜನಾ ಮಂಡಳಿಗಳ ಒಕ್ಕೂಟ) ಅರ್ಚಕ ವೃಂದ, ಶ್ರೀ ಪ್ರಸನ್ನ ಗಣಪತಿ (ಬಲಮುರಿ) ದೇವಸ್ಥಾನ ಶಿವಮೊಗ್ಗ, ಸಂಸ್ಕಾರ ಪ್ರತಿಷ್ಠಾನ ಶಿವಮೊಗ್ಗ (ಆರೋಗ್ಯ ಆರಾಧನಾ ಆಧ್ಯಾತ್ಮ) ಇವರುಗಳ ಆಶ್ರಯದಲ್ಲಿ ಹಿರಿಯ ವಿದ್ವಾಂಸ ಪದ್ಮಶ್ರೀ ಪುರಸ್ಕೃತರಾಗಿದ್ದ ವಿದ್ಯಾವಾಚಸ್ಪತಿ ಡಾ. ಶ್ರೀ ಬನ್ನಂಜೆ ಗೋವಿಂದಾಚಾರ್ಯ ಅವರಿಗೆ ಭಾವನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಜನವರಿ 7ರಂದು ಶಿವಮೊಗ್ಗದ ರವೀಂದ್ರ ನಗರದಲ್ಲಿರುವ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಕಾರ್ಯಕ್ರಮ ನಡೆಯಿತು.
ಪ್ರಸಿದ್ಧ ಪ್ರವಚನಕಾರ ವಿದ್ವಾನ್ ಕೃಷ್ಣರಾಜ ಕುತ್ಪಾಡಿ ಅವರು ಡಾ. ಬನ್ನಂಜೆ ಅವರ ಕುರಿತು ಉಪನ್ಯಾಸ ನೀಡಿ, ಭಾವ ನಮನ ಸಲ್ಲಿಸಿದರು.

Related Articles

ಪ್ರತಿಕ್ರಿಯೆ ನೀಡಿ

Latest Articles