ಹರಿಹರದಲ್ಲಿ ಹರ ಜಾತ್ರೆಗೆ ಮುಖ್ಯಮಂತ್ರಿಗಳಿಂದ ಚಾಲನೆ

ದಾವಣಗೆರೆ: ಹರಿಹರ ತಾಲ್ಲೂಕಿನ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಹರ ಜಾತ್ರೆ ಮತ್ತು ಸಂಕ್ರಾಂತಿ ಹಬ್ಬಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಂಚಮಸಾಲಿ ಮಠದ ಆವರಣದಲ್ಲಿ ಇಂದು ಜನವರಿ 14ರಂದು ಚಾಲನೆ ನೀಡಿದರು.

ಈ ಸಂದರ್ಭ ತುಮಕೂರು ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಗೃಹಸಚಿವ ಬಸವರಾಜ್ ಬೊಮ್ಮಾಯಿ ಮೊದಲಾದವರು ಉಪಸ್ಥಿತರಿದ್ದರು.
ಜನವರಿ 15ರಂದು ಯುವರತ್ನ ಸಮಾವೇಶ ನಡೆಯಲಿದ್ದು ನಟ ಪುನೀತ್ ರಾಜ್‌ಕುಮಾರ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

Related Articles

ಪ್ರತಿಕ್ರಿಯೆ ನೀಡಿ

Latest Articles