ಇಂದು ಶ್ರೀಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮಿಗಳವರ ಜಯಂತ್ಯುತ್ಸವ

ನಾಗಮಂಗಲ: ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಇಂದು ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ ಶ್ರೀ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮಿಗಳವರ ಜಯಂತ್ಯುತ್ಸವ ಮತ್ತು ಭಕ್ತ ಸಂಗಮ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು ಸಾನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿದರು.

ಸಮಾರಂಭದಲ್ಲಿ ಪೂಜ್ಯ ಕುಡ ಒಕ್ಕಲಿಗರ ಮಹಾಸಂಸ್ಥಾನ ಗುರು ಪೀಠ ವಿಜಯಪುರ, ಶ್ರೀ ಸ್ವರೂಪನಂದ ಸ್ವಾಮೀಜಿಯವರು, ಶ್ರೀ ಆದಿಚುಂಚನಗಿರಿ ಶಾಖಾ ಮಠದ ಪೂಜ್ಯ ಸ್ವಾಮೀಜಿಯವರು, ಸಚಿವರಾದ ಶ್ರೀ ಎಸ್ ಟಿ ಸೋಮಶೇಖರ್ ರವರು, ನಾರಾಯಣಗೌಡರವರು, ಶಾಸಕರಾದ ಸಿ.ಎಸ್ ಪುಟ್ಟರಾಜು, ಶ್ರೀ ಸುರೇಶ್ ಗೌಡ, ವಿಜಯವಾಣಿ ಸಂಪಾದಕ ಚೆನ್ನೇಗೌಡ ಹಾಗೂ ಶ್ರೀ ಮಠದ ಸದ್ಭಕ್ತರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ಪೂಜ್ಯ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಬರೆದ “ಸಂಕಟಹರ ಅಷ್ಟಾಷ್ಟ ಭೈರವ ಸ್ತೋತ್ರಮ್ ಹಾಗೂ ಶ್ರೀ ಕಾಲಭೈರವೇಶ್ವರ ಅಕ್ಷರ ಮಾಲನಮಕಮ್’ ಪುಸ್ತಕ ಬಿಡುಗಡೆ ಮಾಡಲಾಯಿತು.

Related Articles

ಪ್ರತಿಕ್ರಿಯೆ ನೀಡಿ

Latest Articles