ಇಂದು ಬೆಂಗಳೂರು ರಾಮಕೃಷ್ಣ ಆಶ್ರಮದಲ್ಲಿ ಸ್ವಾಮಿ ಹರ್ಷಾನಂದ ಮಹಾರಾಜ್ ಅವರಿಗೆ ಶ್ರದ್ದಾಂಜಲಿ ಕಾರ್ಯಕ್ರಮ

ಬೆಂಗಳೂರು: ಮೂರು ದಶಕಗಳ ಕಾಲ ಶ್ರೀ ಬೆಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷರಾಗಿದ್ದ ಸ್ವಾಮಿ ಹರ್ಷಾನಂದ ಮಹಾರಾಜ್ ಅವರು ಜನವರಿ 12 ರಂದು ನಿಧನರಾಗಿದ್ದು, ಗೌರವಾರ್ಥವಾಗಿ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಜನವರಿ 24 ರಂದು ಬಸವನಗುಡಿಯ್ಲ ಶ್ರೀ ರಾಮಕೃಷ್ಣ ಸಭಾಂಗಣದಲ್ಲಿ ನಡೆಯಲಿದೆ.

ಬೆಳಗ್ಗೆ 7 ಗಂಟೆಗೆ ಶ್ರೀ ರಾಮಕೃಷ್ಣರಿಗೆ ವಿಶೇಷ ಪೂಜೆ, 8 ಗಂಟೆಗೆ ವೇದಪಠಣ ಮತ್ತು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ, ನಂತರ 9 ಗಂಟೆಗೆ ಹೋಮ ನಡೆಯಲಿದೆ.
ಬೆಳಗ್ಗೆ ನಡೆಯುವ ಕಾರ್ಯಕ್ರಮದಲ್ಲಿ ಸ್ವಾಮಿ ರಾಘವೇಶಾನಂದಜೀ ಮಹಾರಾಜ್, ಅಧ್ಯಕ್ಷರು ರಾಮಕೃಷ್ಣ ಮಠ ಊಟಿ, ಸ್ವಾಮಿ ಆತ್ಮವಿದಾನಂದಜೀ ಮಹಾರಾಜ್, ಕಾರ್ಯದರ್ಶಿ ರಾಮಕೃಷ್ಣ ಮಿಷನ್ ಆಶ್ರಮ,ವಿಶಾಖಪಟ್ಟಣ, ಸ್ವಾಮಿ ಮುಕ್ತಿದಾನಂದಜೀ ಮಹಾರಾಜ್, ಅಧ್ಯಕ್ಷರು ಶ್ರೀ ರಾಮಕೃಷ್ಣ ಆಶ್ರಮ ಮೈಸೂರು, ಸ್ವಾಮಿ ಸತ್ಯೇಶಾನಂದಜೀ ಮಹಾರಾಜ್ ಸಹಾಯಕ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್ ,ಬೇಲೂರು ಮಠ, ಸ್ವಾಮಿ ವೀರೇಶಾನಂದ ಸರಸ್ವತೀ ಅಧ್ಯಕ್ಷರು ರಾಮಕೃಷ್ಣ ವಿವೇಕಾನಂದ ಆಶ್ರಮ ತುಮಕೂರು, ಭಾಗವಹಿಸಲಿದ್ದಾರೆ.

ಬೆಳಗ್ಗೆ 10.15 ಕ್ಕೆ ಕಾರ್ಯಕ್ರಮ ಆರಂಭಗೊಳ್ಳಲಿದ್ದು ಸ್ವಾಮಿ ತದ್ಯುಕ್ತಾನಂದಜೀ ಮಹಾರಾಜ್ ಅವರಿಂದ ಪ್ರಾರ್ಥನೆ.

ಸಂತಾಪ ಸಂದೇಶ:
ಸ್ವಾಮಿ ಸ್ಮರಣಾನಂದಜೀ ಮಹಾರಾಜ್ (ಅಧ್ಯಕ್ಷರು ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್ ಬೇಲೂರು ಮಠ, ಹೌರಾ), ಸ್ವಾಮಿ ಗೌತಮಾನಂದಜೀ ಮಹಾರಾಜ್ (ಉಪಾಧ್ಯಕ್ಷರು ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್ ಬೇಲೂರು ಮಠ ಹೌರಾ) ಸ್ವಾಮಿ ಸುವೀರಾನಂದಜೀ ಮಹಾರಾಜ್ (ಪ್ರಧಾನ ಕಾರ್ಯದರ್ಶಿ, ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್, ಬೇಲೂರು ಮಠ ಹೌರಾ).

ಸಂಜೆ 5 ಗಂಟೆಗೆ ಸ್ವಾಮಿ ಭಗವದಾನಂದಜೀ ಮಹಾರಾಜ್ ಅವರಿಂದ ಭಜನೆ.
ಸಂಜೆ 5.30 ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಬೇಲಿಮಠ ಮಹಾಸಂಸ್ಥಾನದ ಶಿವರುದ್ರ ಮಹಾಸ್ವಾಮೀಜಿ, ಮೈಸೂರು ಶ್ರೀ ಸುತ್ತೂರು ಮಠದ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ದಾವಣಗೆರೆ ರಾಮಕೃಷ್ಣ ಮಿಷನ್ ಆಶ್ರಮದ ಸ್ವಾಮಿ ನಿತ್ಯಸ್ಥಾನಂದಜೀ ಮಹಾರಾಜ್, ಗದಗ ವಿಜಯಪುರ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷರು ಸ್ವಾಮಿ ನಿರ್ಭಯಾನಂದ ಸರಸ್ವತಿ ಭಾಗವಹಿಸುವರು.

ಶ್ರದ್ಧಾಂಜಲಿ ಕಾರ್ಯಕ್ರಮವನ್ನು ನೇರವಾಗಿ ವೀಕ್ಷಿಸಲು ಯೂಟೂಬ್‌ನಲ್ಲಿ ಈ ಲಿಂಕ್ ಕ್ಲಿಕ್ ಮಾಡಿ. https://youtube.be/VTmQ6p-e-9I

Related Articles

ಪ್ರತಿಕ್ರಿಯೆ ನೀಡಿ

Latest Articles