ಶ್ರೀರಾಘವೇಂದ್ರ ಸ್ವಾಮಿಗಳವರ ಬೃಂದಾವನಕ್ಕೆ ಅಭಿಷೇಕ, ವಿಶೇಷ ಅಲಂಕಾರ

ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳವರ ಸನ್ನಿಧಿಯಲ್ಲಿ ಪರಮಪೂಜ್ಯ ಶ್ರೀ 108 ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಆದೇಶ ಅನುಗ್ರಹದೊಂದಿಗೆ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರ ಆಚಾರ್ಯರ ನೇತೃತ್ವದಲ್ಲಿ ಗುರುವಾರದ ಪ್ರಯುಕ್ತ ರಾಯರ ಬೃಂದಾವನಕ್ಕೆ ಅಭಿಷೇಕ,ವಿಶೇಷ ಅಲಂಕಾರ ಹಾಗೂ ಸಂಜೆ ಗಜವಾಹನೋತ್ಸವ, ರಥೋತ್ಸವ, ತೊಟ್ಟಿಲು ಸೇವೆ ನಡೆಯಿತು.

ದೇಸಾಯಿ ಸುಧೀಂದ್ರರವರ ಸಹಕಾರದೊಂದಿಗೆ ಪುರಂದರದಾಸರ ಆರಾಧನೆಯ ಪ್ರಯುಕ್ತ ಯುವಪ್ರತಿಭೆ ಶ್ರೀ ರಘುಸಿಂಹ ಮತ್ತು ಸಂಗಡಿಗರಿಂದ ಕೊಳಲು ವಾದನ ಕಾರ್ಯಕ್ರಮವು ನೆರವೇರಿತು. ಈ ಸಂದರ್ಭದಲ್ಲಿ ಭಕ್ತಾದಿಗಳು ಭಾಗವಹಿಸಿ ಗುರುಗಳ ಅನುಗ್ರಹಕ್ಕೆ ಪಾತ್ರರಾದರು ಎಂದು ಕಿಶೋರ್ ಆಚಾರ್ಯರು ತಿಳಿಸಿದರು.

Related Articles

ಪ್ರತಿಕ್ರಿಯೆ ನೀಡಿ

Latest Articles