ಫೆ.12 ರಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥರ ಉಪಸ್ಥಿತಿಯಲ್ಲಿ ಸಾಮೂಹಿಕ ರಾಮತಾರಕ ಹೋಮ

ಬೆಂಗಳೂರು: ಮಲ್ಲೇಶ್ವರದ ಶ್ರೀ ರಾಘವೇಂದ್ರ ಸೇವಾ ಸಮಿತಿ ಫೆ. 12 ರಂದು ಬೆಳಗ್ಗೆ ಸುಧೀಂದ್ರನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು ಭಾಗವಹಿಸಲಿದ್ದಾರೆ.
ಈ ಸಂದರ್ಭ ಶ್ರೀಗಳು ಸಂಸ್ಥಾನ ಪೂಜೆ ನೆರವೇರಿಸುವರು. ನಂತರ ಸಾಮೂಹಿಕ ಪವಿತ್ರ ರಾಮತಾರಕ ಹೋಮದ ಪೂರ್ಣಾಹುತಿಯನ್ನು ನಡೆಸಿಕೊಡಲಿದ್ದಾರೆ ಶ್ರೀ ರಾಘವೇಂದ್ರ ಸೇವಾ ಸಮಿತಿಯ ಗೌರವ ಕಾರ್ಯದರ್ಶಿ ಹೆಚ್.ನರಹರಿರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

ಪ್ರತಿಕ್ರಿಯೆ ನೀಡಿ

Latest Articles