ಶ್ರೀಮದ್ ರಂಭಾಪುರಿ ಜಗದ್ಗುರುಗಳವರ ಸಾನ್ನಿಧ್ಯದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ

ರಂಭಾಪುರಿ ಪೀಠ (ಬಾಳೆಹೊನ್ನೂರು): ಬಾಳೆಹೊನ್ನೂರು-ಮೇಲ್ಪಾಲ್-ಕೊಪ್ಪ ರಸ್ತೆಯಲ್ಲಿರುವ ಶ್ರೀ ಸೋಮೇಶ್ವರ ದೇವಸ್ಥಾನದಿಂದ ಶ್ರೀ ರಂಭಾಪುರಿ ಮಠದ ಮೂಲಕ ಬಾಳೆಹೊನ್ನೂರಿಗೆ ಸೇರುವ ರಸ್ತೆ ಹಾಗೂ ಬಾಳಗಡಿ-ಮೇಲ್ಪಾಲ್-ಬಾಳೆಹೊನ್ನೂರು ರಸ್ತೆ, ಶ್ರೀ ರಂಭಾಪುರಿ ಮಠದಿಂದ ಚೌಡಿಕೆರೆ ವೃತ್ತದವರೆಗೆ ರಸ್ತೆಗಳ ಅಭಿವೃದ್ಧಿ ಕಾಮಗಾರಿ ಭೂಮಿ ಪೂಜಾ ಸಮಾರಂಭ ಫೆಬ್ರುವರಿ 27 ರಂದು ಬೆಳಗ್ಗೆ 11 ಘಂಟೆಗೆ ಜರುಗುವುದು.
ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದಲ್ಲಿ ಶ್ರೀಮದ್ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರ ಸಾನ್ನಿಧ್ಯದಲ್ಲಿ ಲೋಕೋಪಯೋಗಿ ಇಲಾಖೆಯನ್ನು ಹೊಂದಿದoಥ ರಾಜ್ಯದ ಉಪಮುಖ್ಯ ಮಂತ್ರಿ ಗೋವಿಂದ ಕಾರಜೋಳ ಶಂಖು ಸ್ಥಾಪನೆ ನೆರವೇರಿಸಲಿದ್ದು, ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಉಪಸಭಾಪತಿ ಪ್ರಾಣೇಶ, ಸಂಸದೆ ಶೋಭಾ ಕರಂದ್ಲಾಜೆ, ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್. ಜೀವರಾಜ್, ವಿ.ಪ.ಸದಸ್ಯ ಎಸ್.ಎಲ್. ಬೋಜೇಗೌಡರು, ಜಿಲ್ಲಾ ಪಂಚಾಯತ ಅಧ್ಯಕ್ಷೆ ಸುಜಾತಾ ಕೃಷ್ಣಪ್ಪ, ತಾ.ಪಂ.ಅಧ್ಯಕ್ಷೆ ಪ್ರೇಮಾ, ಮುಖ್ಯ ಇಂಜನಿಯರ್ ಕಾಂತರಾಜ್, ಗ್ರಾಮ ಪಂಚಾಯತಿ ಅಧ್ಯಕ್ಷೆ ಅಂಬುಜಾ, ಉಪಾಧ್ಯಕ್ಷ ಮಹೇಶ ಆಚಾರ್, ಜಿ.ಪಂ.ಸದಸ್ಯೆ ಚಂದ್ರಮ್ಮ, ತಾ.ಪಂ. ಸದಸ್ಯ ಮಂಜು ಹಾಗೂ ಬಿ.ಕಣಬೂರು ಗ್ರಾಮ ಪಂಚಾಯತಿ ಸರ್ವ ಸದಸ್ಯರು ಭಾಗವಹಿಸುವರು ಎಂದು ಶ್ರೀ ಪೀಠದ ಪ್ರಕಟಣೆ ತಿಳಿಸಿದೆ.

ವರದಿ: ಸಿ.ಎಚ್. ಬಾಳನಗೌಡ್ರ

Related Articles

ಪ್ರತಿಕ್ರಿಯೆ ನೀಡಿ

Latest Articles