ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದಲ್ಲಿ ಧರ್ಮಸಭೆ

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ ಚಿಕ್ಕಬಳ್ಳಾಪುರದ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದ 10ನೇ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಲಾಗಿದ್ದ ಧರ್ಮಸಭೆ ಮತ್ತು ಉಚಿತ ನೇತ್ರ ಚಿಕಿತ್ಸಾ ಶಿಬಿರದ ಕಾರ್ಯಕ್ರಮದಲ್ಲಿ ಪರಮಪೂಜ್ಯ ಜಗದ್ಗುರು ಶ್ರೀ ಡಾ॥ ನಿರ್ಮಲಾನಂದನಾಥ ಮಹಾಸ್ವಾಮಿಗಳವರು ಸಾನಿಧ್ಯವನ್ನು ವಹಿಸಿ ಆಶಿರ್ವಚನ ನೀಡಿದರು.

ಈ ಕಾರ್ಯಕ್ರಮದಲ್ಲಿ ಪರಮಪೂಜ್ಯ ಶ್ರೀ ಶಿವರುದ್ರ ಮಹಾಸ್ವಾಮೀಜಿ ಗಳವರು, ಬೇಲಿಮಠ ಬೆಂಗಳೂರು, ಪೂಜ್ಯ ಶ್ರೀ ಶ್ರೀ ಮುಮ್ಮಡಿ ಶಿವರುದ್ರ ಮುನಿ ಸ್ವಾಮೀಜಿ ಮರಳೆಗವಿ ಮಠ, ಪೂಜ್ಯ ಶ್ರೀ ಶ್ರೀ ಶ್ರೀ ಶಿವಲಿಂಗ ಸ್ವಾಮಿಗಳವರು ಕಬೀರಾನಂದಾಶ್ರಮ ಚಿತ್ರದುರ್ಗ, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠಗಳ ಪೂಜ್ಯ ಸ್ವಾಮೀಜಿಗಳವರು, ಶ್ರೀಮಠದ ಸದ್ಭಕ್ತರು ಉಪಸ್ಥಿತರಿದ್ದರು.

Related Articles

ಪ್ರತಿಕ್ರಿಯೆ ನೀಡಿ

Latest Articles