ಮಂತ್ರಾಲಯದ ಶ್ರೀ ಸುಬುಧೇಂದ್ರ ತೀರ್ಥರಿಂದ ಶ್ರೀಮನ್ ಮೂಲ ರಾಮ ದೇವರ ಪೂಜೆ

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ 108 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರು ಶ್ರೀ ಮೂಲ ರಾಮ ದೇವರ ಪೂಜೆಯನ್ನು ಬೆಂಗಳೂರಿನ ಜಯನಗರದ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳವರ ಸನ್ನಿಧಿಯಲ್ಲಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಭಕ್ತಾದಿಗಳು ಭಾಗವಹಿಸಿ ಶ್ರೀ ರಾಮ ದೇವರ ಅನುಗ್ರಹಕ್ಕೆ ಪಾತ್ರರಾಗಿ ಶ್ರೀಪಾದಂಗಳವರಿಂದ ಫಲಮಂತ್ರಾಕ್ಷತೆಯನ್ನು ಸ್ವೀಕರಿಸಿದರು.

ಇದೇ ಸಂದರ್ಭ ಮಂತ್ರಾಲಯದ ಶ್ರೀಗಳಾದ ಶ್ರೀ 108 ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರಿಂದ ಕರ್ನಾಟಕ ರಾಜ್ಯ ಬ್ರಾಹ್ಮಣರ ಅಭಿವೃದ್ಧಿ ಮಂಡಳಿ ಕರ್ನಾಟಕ ಸರ್ಕಾರ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಹಾಗೂ ನಿರ್ದೇಶಕರು ಶ್ರೀ ರಂಗ ವಿಠ್ಠಲ, ಹಾವೇರಿಯ ಶಾಸಕ ನೆಹರು ಒಲೇಕರ್ ಫಲಮಂತ್ರಾಕ್ಷತೆ ಸ್ವೀಕರಿಸಿದರು.

Related Articles

ಪ್ರತಿಕ್ರಿಯೆ ನೀಡಿ

Latest Articles