ಕೃಷ್ಣಪ್ರಿಯ ಕಲಾ ಬಳಗದ ವಾರ್ಷಿಕೋತ್ಸವ ವಾರ್ಷಿಕೋತ್ಸವ

ಬೆಂಗಳೂರು: ಕೃಷ್ಣ ಪ್ರಿಯ ಕಲಾ ಬಳಗದ ಪ್ರಥಮ ವಾರ್ಷಿಕೋತ್ಸವ ಹಾಗೂ “ಸಾಹಿತ್ಯ-ಲಾಲಿತ್ಯ” ಕವನ ಸಂಕಲನ ಲೋಕಾರ್ಪಣೆ ಕಾರ್ಯಕ್ರಮವನ್ನು ಮಾರ್ಚ್ 28 ಭಾನುವಾರ ಮಲ್ಲೇಶ್ವರದ 15ನೇ ಅಡ್ಡರಸ್ತೆಯಲ್ಲಿರುವ ಶುಕ್ರ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು.

ಪೊಲೀಸ್ ಇಲಾಖೆಯ ನಿವೃತ್ತ ಸಹಾಯಕ ಆಡಳಿತಾಧಿಕಾರಿ ಶಿವರಾಮ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕೃಷ್ಣ ಪ್ರಿಯ ಕಲಾ ಬಳಗದ ಸಂಸ್ಥಾಪಕ ಅಧ್ಯಕ್ಷರಾದ ದಿವ್ಯಜ ಬಾಲಾಜಿ ವಹಿಸಿದ್ದರು. ಬೆಂಗಳೂರಿನ ಭಾರತೀಯ ವಿದ್ಯಾಭವನದ ನಿರ್ದೇಶಕರಾದ ಹೆಚ್ ಎನ್ ಸುರೇಶ್ ಅವರು “ಸಾಹಿತ್ಯ-ಲಾಲಿತ್ಯ” ಕವನ ಸಂಕಲನ ಪುಸ್ತಕವನ್ನು ಲೋಕಾರ್ಪಣೆ ಮಾಡಿದರು.

ಇದೇ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಗಳಾಗಿ ಆಗಮಿಸಿದ್ದ ಗಾಯಕರು ಹಾಗೂ ಚಂದ್ರಿಕಾ ಕಲಾ ಬಳಗದ ಸಂಸ್ಥಾಪಕರೂ ಆದ ಚಂದ್ರಿಕಾ ಗಿರೀಶ್ ಅವರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಸಾಹಿತ್ಯಾಭಿಮಾನಿಗಳು ಹಾಗೂ ಸಂಸ್ಥೆಯ ಪದಾಧಿಕಾರಿಗಳು ಹಾಜರಿದ್ದರು.

Related Articles

ಪ್ರತಿಕ್ರಿಯೆ ನೀಡಿ

Latest Articles