ಕಾಗಿನೆಲೆ ಕನಕ ಗುರುಪೀಠದಲ್ಲಿ ಗುರುಪೂರ್ಣಿಮೆ ಜುಲೈ 24 ರಂದು

ಶ್ರೀಮದ್ ಜಗದ್ಗುರು ಶ್ರೀ ರೇವಣಸಿದ್ಧೇಶ್ವರ ಸಿಂಹಾಸನ, ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶ್ರೀಕ್ಷೇತ್ರ ಕಾಗಿನೆಲೆಯಲ್ಲಿ ಗುರುಪೂರ್ಣಿಮೆ ಪ್ರಯುಕ್ತ ಜುಲೈ 24 ರಂದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.


ಜು.24 ರಂದು ಬೆಳಗ್ಗೆ 5 ಗಂಟೆಗೆ ಶ್ರೀ ರೇವಣ ಸಿದ್ಧೇಶ್ವರ, ಶ್ರೀ ಬೀರಲಿಂಗೇಶ್ವರ, ಶ್ರೀ ಮೈಲಾರಲಿಂಗೇಶ್ವರ ಮತ್ತು ಶ್ರೀ ಮಹಾಸಿದ್ಧೇಶ್ವರಿ ಭಕ್ತ ಕನಕದಾಸರ ಹಾಗೂ ಬ್ರಹ್ಮಲೀನ ಜಗದ್ಗುರುಗಳ ಅಧಿಷ್ಠಾನದಲ್ಲಿ ರುದ್ರಾಭಿಷೇಕ.


ಬೆಳಗ್ಗೆ 11 ಗಂಟೆಗೆ ಬ್ರಹ್ಮಲೀನ ಜಗದ್ಗುರು ಶ್ರೀ ಬೀರೇಂದ್ರ ಕೇಶವ ತಾರಕಾನಂದಪುರಿ ಮಹಾಸ್ವಾಮೀಜಿ ಅವರ 15ನೇ ವರ್ಷದ ಪುಣ್ಯಾರಾಧನೆ ಕಾರ್ಯಕ್ರಮವು ಶ್ರೀ ಕ್ಷೇತ್ರ ಕಾಗಿನೆಲೆಯ ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ನಡೆಯಲಿದೆ.

Related Articles

ಪ್ರತಿಕ್ರಿಯೆ ನೀಡಿ

Latest Articles