ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕ್ಕಳಿಗೆ ಆಧ್ಯಾತ್ಮಿಕ ಶಿಕ್ಷಣ ಕಾರ್ಯಾಗಾರ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕ್ಕಳಿಗೆ ಧಾರ್ಮಿಕ ಶಿಕ್ಷಣದ ತರಗತಿಗಳು ನಡೆಯಲಿದೆ.

ಪ್ರತಿ ಸೋಮವಾರ ಸಂಜೆ ಈ ತರಗತಿಗಳು ನಡೆಯಲಿದ್ದು, 15 ವರ್ಷದೊಳಗಿನ ಮಕ್ಕಳು ಈ ತರಗತಿಗಳಲ್ಲಿ ಭಾಗವಹಿಸಬಹುದಾಗಿದೆ.

ದೈನಂದಿನ ಆಚಾರ- ವಿಚಾರ, ಶ್ಲೋಕಗಳು, ಪುರಾಣ ಕತೆಗಳು, ನೀತಿಕತೆಗಳು, ಭಜನೆ ಇತ್ಯಾದಿಗಳನ್ನು ಈ ಯೋಜನೆಯು ಒಳಗೊಂಡಿರುತ್ತದೆ.

ಕ್ರಿಯಾತ್ಮಕವಾಗಿ ಭಾಗವಹಿಸಿದ ಮಕ್ಕಳಿಗೆ ಪ್ರಮಾಣ ಪತ್ರವನ್ನು ನೀಡಲಾಗುವುದು. ಶಿಕ್ಷಣವು ಸಂಪೂರ್ಣವಾಗಿ ಉಚಿತವಾಗಿರುತ್ತದೆ.

ಹೆಚ್ಚಿನ ಮಾಹಿತಿಗೆ ಹಾಗೂ ನೊಂದಾವಣೆಗೆ ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಬಹುದು. 08251-230511.

ವೀಣಾ ಬಿ ಕೆ 9481443214

Related Articles

ಪ್ರತಿಕ್ರಿಯೆ ನೀಡಿ

Latest Articles