ಉಡುಪಿ ರಾಜಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ: ಪರ್ಯಾಯ ಶ್ರೀ ಅದಮಾರು ಮಠದ ಆಶ್ರಯದಲ್ಲಿ ರಾಜಾಂಗಣದಲ್ಲಿ ಯಕ್ಷಗಾನ ಕಲಾರಂಗ (ರಿ) ಉಡುಪಿ ಇವರು ಆಯೋಜಿಸಿರುವ ಪ್ರಶಸ್ತಿ ಪ್ರದಾನ  ಸಮಾರಂಭ ಸೆ. 26 ರಂದು ನಡೆಯಿತು.

ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಕರ್ಗಲ್ಲು ವಿಶ್ವೇಶ ಭಟ್ ಇವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ  ಪ್ರಶಸ್ತಿ, ವಾಸುದೇವ ರಾವ್ ಸುರತ್ಕಲ್ ಇವರಿಗೆ ಮಟ್ಟಿ ಮುರಳೀಧರ ರಾವ್ ಪ್ರಶಸ್ತಿ, ವಿದ್ವಾನ್ ಉಮಾಕಾಂತ ಭಟ್ ಕೆರೇಕೈ ಇವರಿಗೆ ಪೆರ್ಲ ಪಂಡಿತ ಕೃಷ್ಣ ಭಟ್ ಪ್ರಶಸ್ತಿಯನ್ನು ನೀಡಿದರು.


ಮಂಗಳೂರು ವಿಶ್ವವಿದ್ಯಾಲಯದ  ಕುಲಪತಿಗಳಾದ ಪ್ರೊ.ಪಿ.ಎಸ್.ಎಡಪಡಿತ್ತಾಯ ಅಧ್ಯಕ್ಷತೆ ವಹಿಸಿದ್ದರು.

ಡಾ.ತಲ್ಲೂರು ಶಿವರಾಮ ಶೆಟ್ಟಿ ಹಾಗೂ ಕೃಷ್ಣಪ್ರಸಾದ ಅಡ್ಯಂತಾಯ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.  

ಮಂಗಳೂರು ವಿಶ್ವವಿದ್ಯಾಲಯದ  ಕುಲಪತಿಗಳಾದ ಪ್ರೊ.ಪಿ.ಎಸ್.ಎಡಪಡಿತ್ತಾಯ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

 

Related Articles

ಪ್ರತಿಕ್ರಿಯೆ ನೀಡಿ

Latest Articles