ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕ ವರ್ಧಂತಿ ಮಹೋತ್ಸವ ನಾಳೆ

ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರ 54 ನೇ ವರ್ಷದ ಪಟ್ಟಾಭಿಷೇಕ ವರ್ಧಂತಿ ಆಚರಣೆ ಅ.24 ರಂದು ಸರಳವಾಗಿ ನಡೆಯಲಿದೆ.
ಕಾರ್ಯಕ್ರಮದ ಪ್ರಯುಕ್ತ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯಲಿದೆ. ಸಂಜೆ 5 ಗಂಟೆಗೆ ಮಹೋತ್ಸವ ಸಭಾಭವನದಲ್ಲಿ ನಡೆಯುವ ಸಮಾರಂಭದಲ್ಲಿ ತುಮಕೂರಿನ ನಿವೃತ್ತ ಜಿಲ್ಲಾಧಿಕಾರಿ ಸಿ. ಸೋಮಶೇಖರ್ ಅಭಿನಂದನ ಭಾಷಣ ಮಾಡುವರು. ಆ ಬಳಿಕ ವೀರೇಂದ್ರ ಹೆಗ್ಗಡೆ ಅವರು ಮುಂದಿನ ವರ್ಷದ ಹೊಸ ಯೋಜನೆಗಳನ್ನು ಪ್ರಕಟಿಸಲಿದ್ದಾರೆ.

Related Articles

ಪ್ರತಿಕ್ರಿಯೆ ನೀಡಿ

Latest Articles