ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಡಿ.4, 5 ರಂದು

ಹೊನ್ನಾವರ: ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ ಆಯೋಜಿಸಿರುವ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಕಾರ್ಯಕ್ರಮ ಡಿಸೆಂಬರ್ 4, 5 ರಂದು ಉತ್ತರಕನ್ನಡ ಜಿಲ್ಲೆಯ ಹೊನ್ನಾವರದ ಗುಣವಂತೆ ಯಕ್ಷಾಂಗಣದಲ್ಲಿ ನಡೆಯಲಿದೆ.
ಕೆರೆಮನೆ ಶಿವರಾಮ ಹೆಗಡೆ ಮತ್ತು ಕೆರೆಮನೆ ಗಜಾನನ ಹೆಗಡೆ ಪ್ರಶಸ್ತಿ ಪ್ರದಾನ, ಕೆರೆಮನೆ ಶಂಭುಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಸಂಮಾನ, ವಿಚಾರ ಸಂಕಿರಣ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಜ್ಯೋತಿ ಹೆಗಡೆ

ಡಿಸೆಂಬರ್ 5 ರಂದು ಸಂಜೆ 6.30 ರಿಂದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಿರಸಿಯ ಜ್ಯೋತಿ ಹೆಗಡೆ ಅವರಿಂದ ರುದ್ರವೀಣೆ, ಗುರುಮೂರ್ತಿ ವೈದ್ಯ ಅವರಿಂದ ಪಖಾವಾಜ್, ಕೇರಳದ ಫೋಕ್‌ಲ್ಯಾಂಡ್ ಶ್ರೀ ಕರಿವೆಲ್ಲೂರ್ ರತ್ನಕುಮಾರ್ ಮತ್ತು ತಂಡದವರಿ0ದ ಒಟ್ಟನ್ ತುಳ್ಳಾಲ್ ಮತ್ತು ಶೀತಂಕನ್ ತುಳ್ಳಾಲ್ ನೃತ್ಯ, ಉಡುಪಿಯ ನೃತ್ಯನಿಕೇತನ ಕೊಡವೂರು ಕಲಾವಿದರಿಂದ ‘ನಾರಸಿಂಹ’ ನೃತ್ಯರೂಪಕ.

Related Articles

ಪ್ರತಿಕ್ರಿಯೆ ನೀಡಿ

Latest Articles