ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ಶ್ರೀ ಸತ್ಯನಾರಾಯಣ ಪೂಜೆ

ಬೆಂಗಳೂರಿನ ಜಯನಗರದ 5 ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ಪರಮಪೂಜ್ಯ ಶ್ರೀ 108 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶ ಅನುಗ್ರಹ ದೊಂದಿಗೆ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್. ಕೆ ವಾದೀಂದ್ರಾಚಾರ್ಯರ ಮಾರ್ಗದರ್ಶನದಲ್ಲಿ “ಧನುರ್ಮಾಸ” ಪೂಜೆಯ ಅಂಗವಾಗಿ ಶ್ರೀ ಗುರುರಾಯರ ಬೃಂದಾವನಕ್ಕೆ ವಿಶೇಷ ಪೂಜೆ ಮಂಗಳಾರತಿಯೊಂದಿಗೆ ಪ್ರಾತಃ ಕಾಲದಲ್ಲಿ ಲೋಕಕಲ್ಯಾಣಕ್ಕಾಗಿ ಪ್ರಾರ್ಥಿಸಿ ಸಾಮೂಹಿಕ ಶ್ರೀ ಸತ್ಯನಾರಾಯಣವ್ರತ ಪೂಜೆಯನ್ನು ಪುರೋಹಿತರಾದ ನಂದಕಿಶೋರಾಚಾರ್ಯರು ನೆರವೇರಿಸಿದರು.

ಈ ಸಂದರ್ಭದಲ್ಲಿ ಭಕ್ತಾದಿಗಳು ಪೂಜೆಯಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿ ಶ್ರೀ ಹರಿ ವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು.

Related Articles

ಪ್ರತಿಕ್ರಿಯೆ ನೀಡಿ

Latest Articles