ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಡಿ. 29 ರಂದು

ಕುಂಭಾಸಿ: ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶೃಂಗೇರಿ ಶ್ರೀ ಶಾರದಾಪೀಠಾಧೀಶ್ವರ ಶ್ರೀ ಶಂಕರಾಚಾರ್ಯ ಶ್ರೀ ಶ್ರೀ ಭಾರತೀ ತೀರ್ಥ ಸ್ವಾಮೀಜಿ ಹಾಗೂ ಶೃಂಗೇರಿ ಪೀಠದ ಕಿರಿಯ ಶ್ರೀಗಳಾದ ಶ್ರೀ ವಿಧುಶೇಖರ ಭಾರತೀ ಅವರ ಆಶೀರ್ವಾದಗಳೊಂದಿಗೆ ಡಿಸೆಂಬರ್ 29 ರಂದು ಸಂಜೆ 5 ಗಂಟೆಗೆ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಲಿದೆ.

ತಿರುಮಲದಲ್ಲಿ ಪ್ರತಿನಿತ್ಯ ನಡೆಯುವ ಆಗಮ ಪದ್ಧತಿಯಂತೆ ಬೆಂಗಳೂರು ಶ್ರೀವಾರಿ ಫೌಂಡೇಶನ್‌ನ ಸಂಸ್ಥಾಪಕ ಎಸ್ ವೆಂಕಟೇಶ ಮೂರ್ತಿ ಅವರ ನೇತೃತ್ವದಲ್ಲಿ ನಡೆಯಲಿದೆ.


ಮಧ್ಯಾಹ್ನ ಮಹಾಮಂಗಳಾರತಿ ನಂತರ ಅನ್ನಸಂತರ್ಪಣೆ, ಸಂಜೆ 4 ಗಂಟೆಗೆ ಶೋಭಾಯಾತ್ರೆ, ಸಂಜೆ 5 ರಿಂದ ಶ್ರೀ ಶ್ರೀನಿವಾಸ ದೇವರ ಹಾಗೂ ಪದ್ಮಾವತಿ ದೇವಿಯ ಕಲ್ಯಾಣೋತ್ಸವ ಕಾರ್ಯಕ್ರಮ, ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ.
ಇದೇ ಸಂದರ್ಭದಲ್ಲಿ ಮೈಸೂರಿನ ಕಲಾವಿದರಾದ ವಿದುಷಿ ಡಾ ದೀಪಿಕಾ ಪಾಂಡುರ0ಗಿ ಮತ್ತು ತಂಡದವರಿ0ದ ದಾಸವಾಣಿ ಕಾರ್ಯಕ್ರಮ ಇರಲಿದೆ.

Related Articles

ಪ್ರತಿಕ್ರಿಯೆ ನೀಡಿ

Latest Articles