ರಂಭಾಪುರಿ ಪೀಠ (ಬಾಳೆಹೊನ್ನೂರು): ಶ್ರೀ ಜಗದ್ಗುರು ರೇಣುಕಾಚಾರ್ಯರು ಆವಿರ್ಭವಿಸಿದ ತೆಲಂಗಾಣ ರಾಜ್ಯದ ಕೊಲನಪಾಕ ಶ್ರೀ ಸ್ವಯಂಭು ಸೋಮೇಶ್ವರ ಕ್ಷೇತ್ರದಲ್ಲಿ ಜನವರಿ 3 ರಿಂದ 7ರ ವರೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಇಷ್ಟಲಿಂಗ ಪೂಜಾನುಷ್ಠಾನ ಕೈಗೊಗೊಳ್ಳಲಿದ್ದಾರೆ.
ತಮ್ಮ 66 ನೇ ಜನ್ಮ ದಿನೋತ್ಸವದ ಹಿನ್ನೆಲೆಯಲ್ಲಿ 5 ದಿನಗಳ ಇಷ್ಟಲಿಂಗ ಮಹಾಪೂಜಾ ಮತ್ತು ಚಂಡಿಕಾ0ಬಾ ಸಮೇತ ಶ್ರೀ ಸೋಮೇಶ್ವರ ಮಹಾಸ್ವಾಮಿಗೆ ವಿಶೇಷ ರುದ್ರಾಭಿಷೇಕ, ಅಷ್ಟೋತ್ತರ ಮಹಾಪೂಜೆ ನೆರವೇರಿಸಲು ಕ್ಷೇತ್ರಾಭಿವೃದ್ಧಿ ಟ್ರಸ್ಟ್ ಸಿದ್ಧತೆ ನಡೆಸಿದೆ.
ಜನವರಿ 7ರಂದು ಜರುಗಲಿರುವ ಶ್ರೀ ರಂಭಾಪುರಿ ಜಗದ್ಗುರುಗಳ 66 ನೇ ಜನ್ಮ ದಿನೋತ್ಸವ ಸಮಾರಂಭದಲ್ಲಿ ಕರ್ನಾಟಕ, ತೆಲಂಗಾಣ, ಆಂಧ್ರ ಮತ್ತು ಮಹಾರಾಷ್ಟçದಿಂದ ಹಲವಾರು ಮಠಾಧೀಶರು ಮತ್ತು ಶಿಷ್ಯ ಸದ್ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ.
ಮಾಹಿತಿ: ಸಿ.ಎಚ್. ಬಾಳನಗೌಡ್ರ
ವಾರ್ತಾ ಸಂಯೋಜನಾಧಿಕಾರಿ,
ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠ,
ಬಾಳೆಹೊನ್ನೂರು