ಉಡುಪಿ: ಶಿರಸಿಯ ಸೋಂದಾ ಸ್ವರ್ಣವಲ್ಲೀ ಮಠದಲ್ಲಿ ಜನವರಿ 8, 9 ರಂದು ನಡೆಯುವ ರಾಷ್ಟ್ರ ಮಟ್ಟದ ಇತಿಹಾಸ ಸಮ್ಮೇಳನ ಮತ್ತು ಸೋದೆ ಸದಾಶಿವರಾಯ ಪ್ರಶಸ್ತಿ ಪ್ರದಾನ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಉಡುಪಿಯ ಶ್ರೀಕೃಷ್ಣ ಮಠ ಸೋದೆ ವಾದಿರಾಜ ಮಠದಲ್ಲಿ ವಿಶ್ವವಲ್ಲಭ ತೀರ್ಥ ಶ್ರೀಪಾದ ಸ್ವಾಮಿಗಳು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸಮ್ಮೇಳನದ ಸಂಚಾಲಕರಾದ ಲಕ್ಷ್ಮೀಶ್ ಹೆಗಡೆ, ಸೋಂದಾ, ಹಿಂದು ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ ಸಹನಿಧಿಪ್ರಮುಖ್ ಹರೀಶ್ ಕುಮಾರ್, ಹಿಂದೂ ಜಾಗರಣಾ ವೇದಿಕೆಯ ಮಂಗಳೂರು ವಿಭಾಗದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕುಕ್ಕೆ ಹಳ್ಳಿ, ಮಂಗಳೂರು ವಿಭಾಗದ ಪ್ರಚಾರ ಪ್ರಮುಖರಾದ ಸಂದೀಪ್ ಪಂಪ್ವೆಲ್ ಉಪಸ್ಥಿತರಿದ್ದರು.