ಶ್ರೀ ರಂಭಾಪುರಿ ಜಗದ್ಗುರುಗಳವರ ಪೀಠಾರೋಹಣ ವರ್ಧಂತಿ ಮಹೋತ್ಸವ ಫೆ. 3ರಂದು


ರಂಭಾಪುರಿ ಪೀಠ (ಬಾಳೆಹೊನ್ನೂರು): ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ 31ನೇ ವರ್ಷದ ಪೀಠಾರೋಹಣ ವರ್ಧಂತಿ ಮಹೋತ್ಸವ ಫೆಬ್ರವರಿ 3ರಂದು ಬೆಳಗ್ಗೆ 11 ಗಂಟೆಗೆ ಜರುಗಲಿದೆ.

ಬಾಳೆಹೊನ್ನೂರು ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠದಲ್ಲಿ ಸರಳ ಹಾಗೂ ಸಾಂಪ್ರದಾಯಿಕವಾಗಿ ನಡೆಯುವ ವರ್ಧಂತಿ ಮಹೋತ್ಸವದಲ್ಲಿ ಶ್ರೀ ಜಗದ್ಗುರುಗಳು ವೀರಸಿಂಹಾಸನ ಪೂಜೆಯೊಂದಿಗೆ ಪೀಠಾರೋಹಣ ಮಾಡಿ ಶುಭಾಶೀರ್ವಾದ ಸಂದೇಶ ಅನುಗ್ರಹಿಸುವರು. ಪ್ರಾತ:ಕಾಲದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರಿಗೆ, ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿಗೆ, ಶ್ರೀ ಸೋಮೇಶ್ವರ ಮಹಾಲಿಂಗಕ್ಕೆ ಮಹಾರುದ್ರಾಭಿಷೇಕ, ಅಷ್ಟೋತ್ತರ ಲಕ್ಷ ಬಿಲ್ವಾರ್ಚನೆ ಹಾಗೂ ಶಕ್ತಿಮಾತೆ ಶ್ರೀ ಚೌಡೇಶ್ವರಿ-ಶ್ರೀ ಭದ್ರಕಾಳಿ-ಶ್ರೀ ಪಾರ್ವತಿ ಅಮ್ಮನವರಿಗೆ ಕುಂಕುಮಾರ್ಚನೆ ಮಹಾಮಂಗಲ ಜರುಗಿ ತೀರ್ಥ ಪ್ರಸಾದ ವಿನಿಯೋಗ ಮಾಡಲಾಗುವುದು.

ಕೋವಿಡ್-19 ರ ಅಲೆ ಇರುವುದರಿಂದ ಆಗಮಿಸುವ ಪ್ರತಿಯೊಬ್ಬರೂ ನಿಯಮಾವಳಿಗಳನ್ನು ಪಾಲಿಸಬೇಕು ಎಂದು ಶ್ರೀ ಪೀಠದ ಪ್ರಕಟಣೆಯಲ್ಲಿ ತಿಳಿಸಿದೆ.

ವರದಿ: ಸಿ.ಎಚ್. ಬಾಳನಗೌಡ್ರ
ವಾರ್ತಾ ಸಂಯೋಜನಾಧಿಕಾರಿ,
ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠ,
ಬಾಳೆಹೊನ್ನೂರು.

Related Articles

ಪ್ರತಿಕ್ರಿಯೆ ನೀಡಿ

Latest Articles