ಮಂಗಳಾರತಿ ಮತ್ತು ತೀರ್ಥ

ಸಾಮಾನ್ಯವಾಗಿಯ ದೇವಾಲಯಗಳಿಗೆ ಭೇಟಿಯಿತ್ತಾಗ ಮಂಗಳಾರತಿ ಮತ್ತು ತೀರ್ಥ ತೆಗೆದುಕೊಳ್ಳದೆ ಬರುವವರು ವಿರಳ. ಸುಮ್ಮನೆ ಕೈನೀಡಿ ತೆಗೆದುಕೊಳ್ಳುವವರೂ ಇದ್ದೇವೆ. ಹಾಗಾದರೆ ಅವುಗಳನ್ನೇಕೆ ತೆಗೆದುಕೊಳ್ಳಬೇಕು? ಮಂಗಳಾರತಿಯೇ ಮೊದಲೇಕೆ ? ತೀರ್ಥ ನಂತರವೇಕೆ ? ಈ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

ದೇವರ ಶಿಲಾ ಮೂರ್ತಿಗೆ ಜಲಾಭಿಷೇಕ ಮಾಡುವುದು ನಿತ್ಯವಿಧಿಗಳಲ್ಲಿ ಒಂದು. ಅಂತಹ ದೇವರ ಮೂರ್ತಿಯನ್ನು ನಿರ್ದಿಷ್ಟ ಶಿಲೆಗಳಿಂದ ಮಾಡಿರುತ್ತಾರೆ. ಸಾಮಾನ್ಯವಾಗಿ ’ಸಾಲಿಗ್ರಾಮ ಶಿಲೆ’, ’ಕೃಷ್ಣ ಶಿಲೆ’ ಹಾಗೂ ’ನವರತ್ನ ಶಿಲೆ’ ಗಳಿಂದ ಕೆತ್ತಲ್ಪಟ್ಟ ಮೂರ್ತಿಗಳಿರುತ್ತವೆ. (ಗ್ರಾನೈಟ್, ಬಳಪದ ಕಲ್ಲು, ಇನ್ನಿತರ ಶಿಲೆಗಳು ಶಾಸ್ತ್ರೋಕ್ತ ರೀತಿ ಪೂಜಾರ್ಹವಲ್ಲ.) ಈ ಶಿಲೆಗಳು ಅಪೂರ್ವವಾದ ಶಕ್ತಿಯನ್ನು ಹೊಂದಿರುವುದರ ಜೊತೆಗೆ ಸಾಕಷ್ಟು ಖನಿಜಾಂಶಗಳನ್ನು ಒಳಗೊಂಡಿರುತ್ತದೆ. ಅಂತಹ ಶಿಲೆಯ ಮೇಲೆ ಬಿದ್ದ ನೀರು ತನ್ನ ಜೊತೆ ಎಲ್ಲಾ ಸತ್ವಗುಣಗಳನ್ನು ತಂದಿರುತ್ತದೆ. ಅಂತಹ ನೀರನ್ನು ಒಂದು ಪಾತ್ರೆಯಲ್ಲಿ ಹಿಡಿದಿಡಲಾಗುತ್ತದೆ.

ಅಭಿಷೇಕ ಹಾಗೂ ಮಂಗಳಾರತಿ ಸಮಯಗಳಲ್ಲಿ ಜೋರಾಗಿ ಘಂಟಾನಾದವನ್ನು ಮಾಡಲಾಗುತಿರುತ್ತದೆ. ಆ ನಾದದ ಮಾರ್ದನಿಯೊಂದಿಗೆ ಅದರಿಂದ ’ಅಯಾನಿಕ್’ ತರಂಗಗಳೂ ( Ionic waves ) ಸಹ ಉತ್ಪತ್ತಿಯಾಗುತ್ತದೆ. ಇಂತಹ ಅಯಾನ್ ಗಳು ಗರ್ಭಾಂಗಣದ ತುಂಬೆಲ್ಲಾ ಪ್ರವೇಶಿಸಿ ಹಿಡಿದಿಟ್ಟ ತೀರ್ಥದಲ್ಲೂ ವಿಲೀನವಾಗುತ್ತವೆ.

“ಅಯಾನ್” ಗಳಿಗೆ ಸೂಕ್ಷ್ಮಾತಿ ಸೂಕ್ಷ್ಮ ಜೀವಿಗಳನ್ನು ನಾಶಪಡಿಸುವ ಶಕ್ತಿಯು ಇದ್ದು ನಮ್ಮ ದೇಹಕ್ಕೆ ಬೇಕಾಗುವ ಸಾಕಷ್ಟು ಸತ್ವಗಳನ್ನು ಒದಗಿಸುತ್ತದೆ. ಇಂತಹ ಅಯಾನ್ ಯುಕ್ತ ಅಥವಾ ಖನಿಜಯುಕ್ತ ತೀರ್ಥಕ್ಕೆ ಅಂತಿಮವಾಗಿ ತುಳಸಿಯನ್ನು ಸೇರಿಸಲಾಗುತ್ತದೆ. ತುಳಸಿಗೆ ಆಯುರ್ವೇದದಲ್ಲಿ ಎಂತಹ ಪ್ರಮುಖ ಸ್ಥಾನವಿದೆ ಎಂಬುದು ತಿಳಿದಿರುವ ವಿಚಾರವೇ. ಇವುಗಳೆಲ್ಲದರಿಂದ ಕೂಡಿದ ಜಲ ಕೇವಲ ಜಲವಾಗದೇ ಔಷಧೀಯ ಗುಣಗಳುಳ್ಳ ತೀರ್ಥವಾಗುತ್ತದೆ. ಪಚ್ಚಕರ್ಪೂರ, ಕೇಸರಿ ಮುಂತಾದವುಗಳನ್ನು ತೀರ್ಥಕ್ಕೆ ಬೆರೆಸುತ್ತಾರೆ.

ಮಂಗಳಾರತಿಯ ವಿಷಯಕ್ಕೆ ಬಂದರೆ ತುಪ್ಪದಲ್ಲಿ ಅದ್ದಿದ(ನೆನೆಸಿದ) ಹತ್ತಿಯಿಂದ ಮಾಡಿದ ಬತ್ತಿಯನ್ನು ಹಚ್ಚಿ ಬೆಳಗುವುದರಿಂದ ಆರತಿ ಮಾಡುವುದನ್ನು ನೋಡುವುದರಿಂದ ಏಕಾಗ್ರತೆ ಸಿದ್ಧಿಸುವುದಲ್ಲದೆ ಅಂತಹ ಆರತಿಯ ಮೇಲೆ ನಮ್ಮ ಬಲ ಅಂಗೈಯನ್ನು ಸ್ವಲ್ಪಹೊತ್ತು ಹಿಡಿದರೆ ಶಾಖ ಅಂಗೈ ಮೂಲಕ ಪ್ರವೇಶವಾಗಿ ’ನರವ್ಯೂಹ’ ಹೆಚ್ಚು ಕ್ರಿಯಾಶೀಲವಾಗುತ್ತದೆ. ಜೊತೆಗೆ ಅಂಗೈನಲ್ಲಿ ಇರಬಹುದಾದ ಎಲ್ಲಾ ಕ್ರಿಮಿಕೀಟಗಳು ನಾಶವಾಗುತ್ತದೆ. ಈ ರೀತಿ ಶುದ್ಧ ಅಂಗೈನಿಂದ ತೀರ್ಥವನ್ನು ತೆಗೆದುಕೊಂಡು ಕುಡಿದರೆ ನಮ್ಮ ದೇಹಕ್ಕೆ ಆರೋಗ್ಯ ಲಭಿಸುತ್ತದೆಯಲ್ಲವೆ!!?

ಆದ್ದರಿಂದ ಮೊದಲು ಆರತಿ ನಂತರ ತೀರ್ಥ ಸರಿಯಾದ ಕ್ರಮ.

(ಸಂಗ್ರಹ)

Related Articles

ಪ್ರತಿಕ್ರಿಯೆ ನೀಡಿ

Latest Articles