ಶ್ರೀ ರಾಘವೇಂದ್ರ ಸ್ವಾಮಿಗಳ ಪಟ್ಟಾಭಿಷೇಕ ಮಹೋತ್ಸವ

ಬೆಂಗಳೂರಿನ ಶೇಷಾದ್ರಿಪುರಂ ಪ್ಲಾಟ್ ಫಾರಂ ರಸ್ತೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ 108 ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ‘ಕಲಿಯುಗ ಕಾಮಧೇನು’ ಶ್ರೀ ರಾಘವೇಂದ್ರ ಗುರುಸಾರ್ವಭೌಮರ ಪಟ್ಟಾಭಿಷೇಕ ಮಹೋತ್ಸವದ ಪ್ರಯುಕ್ತ ಮಾರ್ಚ್ 4 ಶುಕ್ರವಾರ ಬೆಳಗ್ಗೆ ಎಂಟು ಗಂಟೆಗೆ ವಾಯುಸ್ತುತಿ ಪಾರಾಯಣ, ಶ್ರೀ ರಾಘವೇಂದ್ರ ಸ್ವಾಮಿಗಳ ಅಷ್ಟೋತ್ತರ ಪಾರಾಯಣ ಸಹಿತ ಗುರುಗಳ ಬೃಂದಾವನಕ್ಕೆ ಫಲ-ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ಶ್ರೀ ರಾಘವೇಂದ್ರ ಅಷ್ಟಾಕ್ಷರ ಹೋಮ, ಮಹಾಮಂಗಳಾರತಿ ಕಾರ್ಯಕ್ರಮಗಳು ಜರುಗಿದವು.

ಸಂಜೆ 6 ಗಂಟೆಗೆ ಅಷ್ಟಾವಧಾನ, ಮಹಾಮಂಗಳಾರತಿ, ಸಾಂಸ್ಕೃತಿಕ ಕಾರ್ಯಕ್ರಮವಾಗಿ ವಿದುಷಿ ಶ್ರೀಮತಿ ವಾಣಿ ಶ್ರೀಶ ಅವರು ಶ್ರೀ ಅಮಿತ್ ಶರ್ಮಾ ಮತ್ತು ಶ್ರೀ ಸರ್ವೋತ್ತಮ ಅವರ ಪಕ್ಕವಾದ್ಯದವರ ಸಹಕಾರದೊಂದಿಗೆ “ಹರಿನಾಮ ಸಂಕೀರ್ತನೆ” ಕಾರ್ಯಕ್ರಮ ನಡೆಸಿಕೊಟ್ಟರು.

Related Articles

ಪ್ರತಿಕ್ರಿಯೆ ನೀಡಿ

Latest Articles