ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರಿಗೆ ಗುರುವಂದನೆ

ಮಂಗಳೂರು: ಬಂಟ್ಟಾಳ ತಾಲೂಕು, ವಿಟ್ಲದಲ್ಲಿ ಮೂರ್ಜೆನಂದರವಂಶ ಒಕ್ಕಲಿಗಗೌಡ ತರವಾಡು ಟ್ರಸ್ಟ್ (ರಿ) ವತಿಯಿಂದ ಅಕ್ಟೋಬರ್ 22 ರಂದು ನಡೆದ ಗುರುವಂದನಾ-ಕುಟುಂಬ ಸಮ್ಮಿಲನ ಕಾರ್ಯಕ್ರಮದಲ್ಲಿ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ದಿವ್ಯ ಅನುಗ್ರಹ ಸಂದೇಶ ನೀಡಿದರು.

ಈ ಕಾರ್ಯಕ್ರಮದಲ್ಲಿ ಮಂಗಳೂರು ಶಾಖಾಮಠದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ಹಾಗೂ ಪುತ್ತೂರು ಶಾಸಕರಾದ ಸಂಜೀವ ಮಠದೂರು, ರಾಜ್ಯಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ.ಕೆ.ವಿ ರೇಣುಕಾಪ್ರಸಾದ್, ಮಂಡ್ಯ ಕರ್ನಾಟಕ ಸಂಘದ ಅಧ್ಯಕ್ಷರಾದ ಬಿ.ಜಯಪ್ರಕಾಶ್ ಗೌಡ ಹಾಗೂ ಅನೇಕ ಸಂಘ ಸಂಸ್ಥೆಗಳ ಅಧ್ಯಕ್ಷರುಗಳು ಉಪಸ್ಥಿತರಿದ್ದರು.

Related Articles

ಪ್ರತಿಕ್ರಿಯೆ ನೀಡಿ

Latest Articles