ಪುರಂದರ ನಮನ

ಬೆಂಗಳೂರು: ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಶ್ರೀ ಪುರಂದರದಾಸರ ಆರಾಧನೆಯ ಪ್ರಯುಕ್ತ ಜನವರಿ 26, ಗುರುವಾರ ಸಂಜೆ 7-30ಕ್ಕೆ, ವಿದುಷಿ ಶ್ರೀಮತಿ ದಿವ್ಯಾ ಗಿರಿಧರ್ ಅವರ ನಿರ್ದೇಶನದಲ್ಲಿ ಗಾನಸುಧಾ ಮ್ಯೂಸಿಕಲ್ ಅಕಾಡೆಮಿಯ ವಿದ್ಯಾರ್ಥಿಗಳಿಂದ  “ಪುರಂದರ ನಮನ” ವಿಶೇಷ ದಾಸವಾಣಿ ಕಾರ್ಯಕ್ರಮ ಏರ್ಪಡಿಸಿದೆ.

ವಾದ್ಯ ಸಹಕಾರ : ಶ್ರೀ ಅಮಿತ್ ಶರ್ಮಾ (ಕೀ-ಬೋಡ್೯), ಶ್ರೀ ಪ್ರಮೋದ್ ಗಬ್ಬೂರ್ (ತಬಲಾ). ಈ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಗುರುಗಳ  ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ನಂದಕಿಶೋರ್ ಆಚಾರ್ ಅವರು ತಿಳಿಸಿದ್ದಾರೆ.

Related Articles

ಪ್ರತಿಕ್ರಿಯೆ ನೀಡಿ

Latest Articles