ಮನೆಯ ಸಮೃದ್ಧಿ ಹೆಚ್ಚಿಸಲು ಹೀಗೆ ಮಾಡಿ

ಹಣದಿಂದ ನಾವು ಏನೆಲ್ಲ ಕೊಂಡುಕೊಳ್ಳಬಹುದು ಆದರೆ ಮನಸ್ಸಿಗೆ ಶಾಂತಿ ನೆಮ್ಮದಿಯನ್ನಲ್ಲ. ಅದು ಸಿಗಬೇಕು ಅಂದರೆ ನಮ್ಮ ಪೂರ್ವಜರು ಹೇಳಿಕೊಟ್ಟ ಸಂಪ್ರದಾಯಗಳನ್ನುಆಚರಿಸಿದಾಗ ಮಾತ್ರ ಸಾಧ್ಯ.

  • ಮನೆಯಲ್ಲಿ,ಒಡೆದಿರುವ ಅಥವಾ ಬಿರುಕು ಬಿಟ್ಟಿರುವ ಕನ್ನಡಿ ಇಡಬೇಡಿ; ಅದು ನಕಾರಾತ್ಮಕ ಶಕ್ತಿಯನ್ನು ಆಹ್ವಾನಿಸುತ್ತದೆ.
  • ಮನೆಯ ಯಾವುದೇ ಸ್ಥಳದ ನಲ್ಲಿಯಲ್ಲಿ ನೀರು ನಿರಂತರ ಸೋರುವಿಕೆ ಇರಬಾರದು; ಅದರಿಂದ ಹಣ ವ್ಯಯ ಸಂಭವ.
  • ಮನೆಯ ಆವರಣದಲ್ಲಿ ಒಣಗಿದ ಗಿಡಗಳು ಇಡಬೇಡಿ; ಇದರಿಂದ ಮನಸ್ಸನಲ್ಲಿ ಖಿನ್ನತೆ ಉಂಟಾಗುವ ಸಂಭವ ಹೆಚ್ಚು
  • ದೇವರಿಗೆ ಮನೆಯ ಹೂವುಗಳನ್ನೇ ಅರ್ಪಿಸಲು ಪ್ರಯತ್ನಮಾಡಿ. ಹೊರಗಡೆಯಿಂದ, ತಂದ ಹೂವಿಗೆ ಮನೆಯ ನೀರನ್ನು ಸಿಂಪಡಿಸಬೇಕು. ಶುದ್ಧ, ಮಾಡಿ ನಂತರ ಉಪಯೋಗಿಸಬೇಕು. ಇಲ್ಲದಿದ್ದರೆ ಮನೆಯ ಅಡುಗೆ ಸಾಮಗ್ರಿ ಹಾಳಾಗುವ ಸಂಭವ ಹೆಚ್ಚು.
  • ನಿಂತ ಗಡಿಯಾರವು ಅಶುಭ ಲಕ್ಷಣ. ಇದನ್ನು ಕೂಡಲೇ ಸರಿಪಡಿಸುವುದು ಉತ್ತಮ.
  • ದೇವರ ಕೋಣೆಯ ಮೇಲೆ ಅತಿಯಾದ ಭಾರವನ್ನು ಇಡಬಾರದು. ಒಡೆದು ಹೋದ ದೇವರ ಮೂರ್ತಿ ಅಥವಾ ಫೋಟೋಗಳನ್ನು ಇಡಬೇಡಿ. ಮನೆಯಲ್ಲಿ ಹಿರಿಯರಿಗೆ ಮತ್ತು ತಂದೆ-ತಾಯಿಯರಿಗೆ ಕಾಲುಮುಟ್ಟಿ ನಮಸ್ಕಾರ ಮಾಡುವ ಪದ್ಧತಿಯನ್ನು ಮಕ್ಕಳಲ್ಲಿ ಬೆಳೆಸಿ. ಹೆತ್ತವರಿಗೆ ಇದರ ಅವಶ್ಯಕತೆ ಇಲ್ಲದೆ ಇರಬಹುದು. ಆದರೆ ಹೆತ್ತವರ ಆಶೀರ್ವಾದವು ಮಕ್ಕಳನ್ನು ನಿರಂತರ ರಕ್ಷಿಸಲು ಸಹಕಾರಿ.
  • ಕುಲದೇವರಿಗೆ ;ಇಷ್ಟ ದೇವರಿಗೆ; ಗ್ರಾಮ ದೇವರಿಗೆ ಮನೆಯ ಎಲ್ಲ ಶುಭಕಾರ್ಯಗಳಲ್ಲಿಕಾಣಿಕೆಯನ್ನು, ತೆಗೆದು ಇಡುವುದನ್ನುರೂಢಿ ಮಾಡಿ.
  • ಜೇಡರಬಲೆ ಮನೆಯಲ್ಲಿ ಕಟ್ಟಿದ್ದರೆ ತಕ್ಷಣ ನಿವಾರಿಸಿ-ಅದು ಅಶುಭ ತರುವ ಸಂಕೇತ.
  • ಮನೆಯನ್ನುಎಷ್ಟುಶುಚಿಯಾಗಿಇಟ್ಟುಕೊಳ್ಳುತ್ತೇವೆ, ಅಷ್ಟು ದೈವಿಕ, ಕಳೆ ವೃದ್ಧಿಸುವುದು.
  • ಮನೆಯ ಯಾವುದೇ ಜಾಗದಲ್ಲಿ ಪಾರಿವಾಳಗಳು ಮನೆ ಮಾಡಿದರೆ – ಅದು ಕಷ್ಟಗಳು ಎದುರಾಗುವ ಸಂಕೇತ.
  • ಹಿರಿಯರುನಂಬಿಕೊಂಡು ಬಂದ ದೈವಗಳಿಗೆ; ಅವರದೇ ಆದ ಸಂಪ್ರದಾಯಗಳಿಗೆ, ಗೌರವ ತೋರಿಸುವುದು ನಮ್ಮ ಆದ್ಯ ಕರ್ತವ್ಯ.
  • ಉತ್ತರ ದಿಕ್ಕಿಗೆ ತಲೆ ಮಾಡಿ ಮಲಗಬಾರದು. ದಕ್ಷಿಣ ದಿಕ್ಕಿಗೆ ಮುಖ ಮಾಡಿ ನಿರಂತರ ಕುಳಿತುಕೊಳ್ಳುವ ವ್ಯವಸ್ಥೆಇರಬಾರದು ಬರೀನೆಲದಲ್ಲಿ ಮಲಗುವುದಾಗಲಿ, ಹರಿದ ವಸ್ತ್ರಗಳನ್ನು ಧರಿಸುವುದು ಮಾಡಬೇಡಿ.
  • ಪ್ರತೀ ದಿನ ಬೆಳಗ್ಗೆ ಮತ್ತು ಸಂಜೆ ಸಂಧ್ಯಾಕಾಲದಲ್ಲಿ ದೇವರಿಗೆ ದೀಪ ಬೆಳಗುವ ಅಭ್ಯಾಸ ರೂಢಿಮಾಡಿ. ಸೂರ್ಯೋದಯ ಮತ್ತು ಸೂರ್ಯಾಸ್ತದ ಸಮಯದಲ್ಲಿ ವಿಷ್ಣು ಸಹಸ್ರನಾಮ ಅಥವಾ ನಿಮ್ಮ ಇಷ್ಟದೇವರ ಯಾವುದೇ ಸ್ತೋತ್ರ ಮಂತ್ರ {ಭಜನೆ}ಪಠಿಸಿ ಅಥವಾ ಅದನ್ನು ಮನೆಯಲ್ಲಿ ಕೇಳುವಂತೆ ನಿತ್ಯವ್ಯವಸ್ಥೆಮಾಡಿ. ಇದರಿಂದ ಮನೆಯಲ್ಲಿ ಸಾತ್ವಿಕ ವಾತಾವರಣ ವೃದ್ಧಿಯಾಗುತ್ತದೆ.
  • ವರ್ಷಕ್ಕೆ ಒಮ್ಮೆಯಾದರೂ ಗಣ ಹೋಮವನ್ನು ಮಾಡಿದರೆ ತುಂಬಾ ಉತ್ತಮ. ಇದರಿಂದ ವಾಸ್ತು ಸದೃಢವಾಗಿರುತ್ತದೆ.

(ಸಂಗ್ರಹ)

Related Articles

ಪ್ರತಿಕ್ರಿಯೆ ನೀಡಿ

Latest Articles