ರಾಯರ ಮಠದಲ್ಲಿ ಪ್ರತಿ ಗುರುವಾರ ಅನ್ನದಾನ, ಸಾಂಸ್ಕೃತಿಕ ಕಾರ್ಯಕ್ರಮ

ಬೆಂಗಳೂರಿನ ಜಯನಗರದ 5 ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರಸ್ವಾಮಿಗಳವರ ಮಠದಲ್ಲಿ ಪರಮಪೂಜ್ಯ ಶ್ರೀ 108 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶ ಅನುಗ್ರಹದೊಂದಿಗೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್. ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಇನ್ನು ಮುಂದೆ ಪ್ರತಿದಿನ ವಿದ್ವಾಂಸರಿಂದ ಪ್ರವಚನ, ಶ್ರೀ ಹರಿ ಭಜನೆ, ಹಾಗೂ ಪ್ರತಿ ಗುರುವಾರ ಮಧ್ಯಾಹ್ನ ಮಹಾಮಂಗಳಾರತಿ ಆದ ನಂತರ 12-30 ಕ್ಕೆ ಭಕ್ತರಿಗೆ ಅನ್ನದಾನ, ಹಾಗೂ ಸಂಜೆ7-30 ರಿಂದ 9 ಗಂಟೆಯವರೆಗೆ ಭರತನಾಟ್ಯ /ದಾಸವಾಣಿ / ವಾದ್ಯಸಂಗೀತ / ಹರಿಕಥೆ ಕಾರ್ಯಕ್ರಮಗಳು ಮುಂದುವರಿಯಲಿದೆ. ವಿಶೇಷವಾಗಿ ಉದಯೋನ್ಮುಖ ಪ್ರತಿಭೆಗಳಿಗೆ ಮೊದಲ ಆದ್ಯತೆ ಎಂದು ವ್ಯವಸ್ಥಾಪಕರಾದ ಆರ್. ಕೆ. ವಾದೀಂದ್ರಾಚಾರ್ಯರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಸೇವೆ ಮಾಡುವಂತಹ ಆಸಕ್ತಿ ಇರುವವರು ಹೆಚ್ಚಿನ ಮಾಹಿತಿಗಾಗಿ ಶ್ರೀ ನಂದಕಿಶೋರ್ ಆಚಾರ್ಯ ಹಾಗೂ ಶ್ರೀ ಸುಧೀಂದ್ರ ದೇಸಾಯಿ ಅವರನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು. 9945429129,8660349906,9980400535- 08022443962.

Related Articles

ಪ್ರತಿಕ್ರಿಯೆ ನೀಡಿ

Latest Articles