ಹರಿನಾಮ ಸಂಕೀರ್ತನೆ

ಬೆಂಗಳೂರು : ಸೋಸಲೆ ಶ್ರೀ ವ್ಯಾಸರಾಜ ಮಠದ ಪರಮಪೂಜ್ಯ ಶ್ರೀ 1008 ಶ್ರೀ ವಿದ್ಯಾಶ್ರೀಶತೀರ್ಥ ಶ್ರೀಪಾದಂಗಳವರ ಆದೇಶದಂತೆ ನವರಾತ್ರಿ ಸಂಗೀತೋತ್ಸವದ ಪ್ರಯುಕ್ತ ಅಕ್ಟೋಬರ್ 6, ಭಾನುವಾರ ಸಂಜೆ 7 ಗಂಟೆಗೆ ಗಾಂಧಿಬಜಾರಿನ ಬೆಣ್ಣೆ ಗೋವಿಂದಪ್ಪ ಕಲ್ಯಾಣ ಮಂಟಪದಲ್ಲಿ ಮೈಸೂರಿನ ‘ಯುವ ಗಾಯಕ’ ಎ.ಆರ್. ಅಪ್ರಮೇಯ ಇವರಿಂದ “ಹರಿನಾಮ ಸಂಕೀರ್ತನೆ” ಗಾಯನ ಕಾರ್ಯಕ್ರಮ ಏರ್ಪಡಿಸಿದ್ದು, ಇವರ ಗಾಯನಕ್ಕೆ ಪಿಟೀಲು ವಾದನದಲ್ಲಿ ಶ್ರೀ ಎಚ್.ಎನ್. ರಘುನಂದನ್ ಮತ್ತು ಮೃದಂಗ ವಾದನದಲ್ಲಿ ಕು|| ಜ್ಯೋತ್ಸ್ನಾ ಹೆಬ್ಬಾರ್ ಸಹಕರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಂಗೀತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಲಾವಿದರನ್ನು ಪ್ರೋತ್ಸಾಹಿಸಬೇಕೆಂದು ಶ್ರೀಮಠದ ಪದಾಧಿಕಾರಿಗಳು ತಿಳಿಸಿದ್ದಾರೆ.

Related Articles

ಪ್ರತಿಕ್ರಿಯೆ ನೀಡಿ

Latest Articles