ಸುತ್ತೂರಿನಲ್ಲಿಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ 1061ನೇ ಜಯಂತ್ಯುತ್ಸವ

ಮೈಸೂರು: ಸುತ್ತೂರಿನಲ್ಲಿ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ 1061ನೇ ಜಯಂತಿ ಮಹೋತ್ಸವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸುತ್ತೂರು ಮಹಾಸಂಸ್ಥಾನ ಮಠದಲ್ಲಿ ಇಂದು (ಜ.11 ರಂದು) ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಸುತ್ತೂರು ಮಠ ಧರ್ಮ-ಜ್ಞಾನಗಳ ಸಂಗಮ ಕೇಂದ್ರವಾಗಿದೆ. ಮಠ ಲಕ್ಷಾಂತರ ಜನರಿಗೆ ಜ್ಞಾನದಾನ ನೀಡುತ್ತಿದೆ. ಮುಂದೆಯೂ ಅನೇಕ ಯೋಜನೆಗಳನ್ನು ಹಾಕಿಕೊಂಡಿದ್ದು, ಜನರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಇದೇ ಸಂದರ್ಭ ಪರಮಪೂಜ್ಯ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ಸಮಕ್ಷಮದಲ್ಲಿ ಪಂಚಾಂಗ ಬಿಡುಗಡೆ ಮತ್ತು ಕೃತಿ ಲೋಕಾರ್ಪಣೆ ಮಾಡಲಾಯಿತು. ಸಚಿವರು, ಶಾಸಕರು, ಗಣ್ಯರು ಉಪಸ್ಥಿತರಿದ್ದರು.

Related Articles

ಪ್ರತಿಕ್ರಿಯೆ ನೀಡಿ

Latest Articles