ಬಸವನಗುಡಿಯ ರಾಮಕೃಷ್ಣ ಆಶ್ರಮದ ಹಿರಿಯ ಸನ್ಯಾಸಿ ಹಾಗೂ ಅಧ್ಯಕ್ಷ

ಸ್ವಾಮಿ ಹರ್ಷಾನಂದ ಮಹಾರಾಜ್ ವಿಧಿವಶ

ಬೆಂಗಳೂರು: ಇಲ್ಲಿನ ಬಸವನಗುಡಿಯ ರಾಮಕೃಷ್ಣ ಆಶ್ರಮದ ಹಿರಿಯ ಸನ್ಯಾಸಿ ಹಾಗೂ ಅಧ್ಯಕ್ಷರಾಗಿದ್ದ ಸ್ವಾಮಿ ಹರ್ಷಾನಂದ ಮಹಾರಾಜ್ ಅವರು ಇಂದು ಜನವರಿ 12ರಂದು ಮಧ್ಯಾಹ್ನ ವಿಧಿವಶರಾದರು.
ಬಸವನಗುಡಿಯ ಶ್ರೀ ರಾಮಕೃಷ್ಣ ಆಶ್ರಮದ ವಿದ್ಯಾರ್ಥಿ ಮಂದಿರದಲ್ಲಿ (ಹಾಸ್ಟೆಲ್) ಇಂದು ಸಂಜೆ 5ರಿಂದ ರಾತ್ರಿ 8 ಗಂಟೆಯವರೆಗೆ ಹಾಗೂ ನಾಳೆ (ಜ.13) ಬೆಳಗ್ಗೆ 6ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಸ್ವಾಮಿಗಳ ಅಂತಿಮ ದರ್ಶನ ಪಡೆಯಬಹುದು ಎಂದು ಮಠದ ವಿಷ್ಣುಮಯಾನಂದ ಅವರು ತಿಳಿಸಿದ್ದಾರೆ.

Related Articles

ಪ್ರತಿಕ್ರಿಯೆ ನೀಡಿ

Latest Articles