ಜ.30 ರಂದು ಶ್ರೀ ಬಾಬುರಾವ್ ದೇಸಾಯಿ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಪ್ರಚಾರಕರಾಗಿದ್ದ ಬಾಬುರಾವ್ ದೇಸಾಯಿ (97) ಅವರು ಕಳೆದ ಶುಕ್ರವಾರ ವಿಧಿವಶರಾಗಿದ್ದರು.

ಅವರಿಗೆ ಬೆಂಗಳೂರಿನ ವಿಶ್ವಹಿಂದೂ ಪರಿಷತ್‌ನ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ ಜ.30 ರಂದು ಸಂಜೆ 6 ಗಂಟೆಗೆ ಉಮಾ ಟಾಕೀಸ್ ಬಳಿ ಇರುವ ಕೇಶವ ಶಿಲ್ಪದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಬೇಲಿಮಠದ ಶ್ರೀ ಶ್ರೀ ಚರಮೂರ್ತಿ ಶಿವರುದ್ರ ಸ್ವಾಮಿಗಳು ಸಾನ್ನಿಧ್ಯ ವಹಿಸುವರು.

ದಕ್ಷಿಣ ಕ್ಷೇತ್ರೀಯ ಪ್ರಚಾರಕರು, ರಾ.ಸ್ವ.ಸಂಘದ ಸುಧೀರ್ ಜೀ, ವಿಶ್ವ ಹಿಂದೂ ಪರಿಷದ್ ಕೇಂದ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಮಿಲಿಂದ್ ಜೀ ಪರಾಂಡೆ, ಸಂಸ್ಕೃತ ಭಾರತಿ ಕೇಂದ್ರೀಯ ಸಂಘಟನಾ ಕಾರ್ಯದರ್ಶಿ ದಿನೇಶ್ ಕಾಮತ್, ಹಿಂದೂ ಜಾಗರಣ ವೇದಿಕೆ, ದಕ್ಷಿಣ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ ಮೊದಲಾದವರು ಭಾಗವಹಿಸುವರು.

1942ಕ್ಕೆ ಸಂಘ ಪರಿವಾರದ ಪ್ರಚಾರಕರಾಗಿ ಸೇರ್ಪಡೆಯಾಗಿದ್ದ ಬಾಬುರಾವ್ 1949ರಲ್ಲಿ ಉತ್ತರ ಕನ್ನಡ, ಬೆಳಗಾವಿ ಹಾಗೂ ಧಾರವಾಡದ ಜಿಲ್ಲಾ ಪ್ರಚಾರಕರಾಗಿ ಸೇವೆ ಸಲ್ಲಿಸಿದ್ದರು. ಆ ನಂತರ ಧಾರವಾಡ, ಕಲಬುರಗಿ, ಬಳ್ಳಾರಿ ವಿಭಾಗ ಪ್ರಚಾರಕರಾಗಿ ಸೇವೆ ಸಲ್ಲಿಸಿ 1986ರಲ್ಲಿ ವಿಶ್ವ ಹಿಂದೂ ಪರಿಷತ್‌ನ ಕಾರ್ಯದರ್ಶಿ ಆಗಿ ನೇಮಕವಾಗಿದ್ದರು.

Related Articles

ಪ್ರತಿಕ್ರಿಯೆ ನೀಡಿ

Latest Articles