ಮಂತ್ರಾಲಯ ಶ್ರೀಗಳಿಂದ ಜಯನಗರದ ಶ್ರೀ ನಂಜನಗೂಡು ರಾಯರ ಮಠದಲ್ಲಿ ಸಂಸ್ಥಾನ ಪೂಜೆ

ಬೆಂಗಳೂರಿನ ಜಯನಗರದ 5 ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳವರ ಸನ್ನಿಧಿಗೆ ಸುಮಾರು ಒಂದು ವರ್ಷಗಳ ನಂತರದಲ್ಲಿ ಪ್ರಥಮ ಬಾರಿಗೆ ಬೆಂಗಳೂರಿನ ಶ್ರೀಮಠಕ್ಕೆ ಭಾನುವಾರ ಮಂತ್ರಾಲಯದ ಪರಮಪೂಜ್ಯ ಡಾ|| ಶ್ರೀ108 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದರು ಆಗಮಿಸಿ ನೂತನವಾಗಿ ನವೀಕರಿಸಿದ ಮೊದಲನೇ ಮಹಡಿಯ ಪೂಜಾ ಮಂದಿರವನ್ನು ಉದ್ಘಾಟಿಸಿದರು. ನಂತರ ಶ್ರೀಗಳು ಸಂಸ್ಥಾನ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಶ್ರೀಮಠದ ವ್ಯವಸ್ಥಾಪಕರಾದ ಆರ್ ಕೆ ವಾದೀಂದ್ರ ಆಚಾರ್ಯರು ಉಪಸ್ಥಿತರಿದ್ದರು. ನೂರಾರು ಭಕ್ತರು ಭಾಗವಹಿಸಿ ಶ್ರೀಮನ್ಮೂಲರಾಮಚಂದ್ರ ದೇವರ ದರ್ಶನ ಹಾಗೂ ಶ್ರೀರಾಘವೇಂದ್ರಸ್ವಾಮಿಗಳವರ ದರ್ಶನ ಪಡೆದು ಶ್ರೀಗಳವರಿಂದ ಫಲಮಂತ್ರಾಕ್ಷತೆಯನ್ನು ಸ್ವೀಕರಿಸಿ ಶ್ರೀ ಗುರುಗಳ ಅನುಗ್ರಹಕ್ಕೆ ಪಾತ್ರರಾದರು ಎಂದು ಕಿಶೋರ್ ಆಚಾರ್ಯರು ತಿಳಿಸಿದ್ದಾರೆ.

Related Articles

ಪ್ರತಿಕ್ರಿಯೆ ನೀಡಿ

Latest Articles