ಮಾರ್ಚ್ 28 ರಂದು ಶ್ರೀ ಬಿಂದು ಮಾಧವ ಶರ್ಮಾ ಸ್ವಾಮೀಜಿ ಪುಣ್ಯಸ್ಮರಣೆ

ಶಿವಮೊಗ್ಗ: ಬೆಲಗೂರಿನ ಶ್ರೀಕ್ಷೇತ್ರ ಶ್ರೀ ವೀರಪ್ರತಾಪ ಆಂಜನೇಯ ಸ್ವಾಮಿ ದೇವಸ್ಥಾನದ ಅವಧೂತ ಸದ್ಗುರು ಶ್ರೀ ಶ್ರೀ ಬಿಂದು ಮಾಧವ ಶರ್ಮಾ ಅವರ ಪುಣ್ಯ ಸಂಸ್ಮರಣಾ ಕಾರ್ಯಕ್ರಮವು ಶ್ರೀ ಶನೈಶ್ಚರ ದೇವಾಲಯ ಟ್ರಸ್ಟ್, ಧರ್ಮವರ್ಧಿನೀ ಅರ್ಚಕ ವೃಂದ ಶಿವಮೊಗ್ಗ, ಭಜನಾ ಪರಿಷತ್ ಹಾಗೂ ಸಂಸ್ಕಾರ ಪ್ರತಿಷ್ಠಾನ ಇವರ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 28 ರಂದು ಸಂಜೆ 5 ಗಂಟೆಗೆ ಶಿವಮೊಗ್ಗದ ವಿನೋಭ ನಗರದಲ್ಲಿರುವ ಶುಭಮಂಗಳ ಸಮುದಾಯ ಭವನದಲ್ಲಿ ಹೊಸದುರ್ಗ ತಾಲ್ಲೂಕು ನಡೆಯಲಿದೆ.
ಶ್ರೀ ಕ್ಷೇತ್ರದ ನೂತನ ಉತ್ತರಾಧಿಕಾರಿ ಶ್ರೀ ವಿಜಯ ಮಾರುತಿ ಶರ್ಮಾ ಗುರುಗಳ ಮಾರ್ಗದರ್ಶನದೊಂದಿಗೆ ಈ ಕಾರ್ಯಕ್ರಮ ನಡೆಯಲಿದೆ.


ಈ ಕಾರ್ಯಕ್ರಮದ ಅಂಗವಾಗಿ ಸಾಮೂಹಿಕ ಶ್ರೀರಾಮ ತಾರಕ ಮಂತ್ರ, ಜಪ, ವೇದ ವಿದ್ವಾಂಸರಿ0ದ ಉಪನ್ಯಾಸ ಹಾಗೂ ರಾನನಾಮ ಸ್ಮರಣೆಯ ಭಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಶ್ರೀ ವಿಜಯ ಮಾರುತಿ ಶರ್ಮಾ ಅವರು ಸಾನ್ನಿಧ್ಯ ವಹಿಸಲಿದ್ದು, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಬಂಟ್ವಾಳ ವಿದ್ವಾನ್ ಕಶೆಕೋಡಿ ಸೂರ್ಯನಾರಾಯಣ ಭಟ್ ಅವರು ಅವಧೂತರ ಮಹಿಮೆ ಕುರಿತು ವಿಶೇಷ ಉಪನ್ಯಾಸ ನೀಡುವರು. ಶ್ರೀ ಶನೈಶ್ಚರ ದೇವಾಲಯ ಸಮಿತಿ ಟ್ರಸ್ಟ್ ಅಧ್ಯಕ್ಷರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ಭಾಗವಹಿಸುವವರು ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯ ಎಂದು ಪ್ರಕಟಣೆ ತಿಳಿಸಿದೆ.

Related Articles

ಪ್ರತಿಕ್ರಿಯೆ ನೀಡಿ

Latest Articles